Friday, May 23, 2025
Homeಭಕ್ತಿಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ

ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ

ಬೀದರ್ ಮಾರ್ಚ.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ.12 ರಂದು ಬೆಳಿಗ್ಗೆ 11.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ನಗರಸಭೆ ಅಧ್ಯಕ್ಷರಾದ ಮಹಮ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಅವರುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬೇಮಳಖೇಡ ಗೋರ್ಟಾ ಹಿರೇಮಠ ಸಂಸ್ಥಾನದ ಪೂಜ್ಯ ಶ್ರೀ ಷ.ಬ್ರ.ಡಾ.ರಾಜಶೇಖರ ಶಿವಾಚಾರ್ಯ ಸ್ವಾಮಿಗಳು ಅತಿಥಿ ಉಪನ್ಯಾಸವನ್ನು ನೀಡಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3