Saturday, May 24, 2025
Homeಜಿಲ್ಲೆಮೇ.4 ರಂದು ಮಹರ್ಷಿ ಭಗೀರಥ ಜಯಂತಿ ಅದ್ದೂರಿಯಾಗಿ ಆಚರಿಸಲು ಸಿದ್ಧತೆ : ಜಗನ್ನಾಥ ತಡಪಳ್ಳಿ

ಮೇ.4 ರಂದು ಮಹರ್ಷಿ ಭಗೀರಥ ಜಯಂತಿ ಅದ್ದೂರಿಯಾಗಿ ಆಚರಿಸಲು ಸಿದ್ಧತೆ : ಜಗನ್ನಾಥ ತಡಪಳ್ಳಿ

ಬೀದರ್ : ಮಹರ್ಷಿ ಭಗೀರಥ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪ್ಪಾರ ಸಮಾಜ ಸಂಘದ ಪ್ರಧಾನ ಕಾರ್ಯದರ್ಶಿ ಜಗನ್ನಾಥ ತಡಪಳ್ಳಿ ಅವರು ಹೇಳಿದರು.
ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಉಪ್ಪಾರ ಸಮಾಜ ಸಂಘದ ಸಹಯೋಗದಲ್ಲಿ ಮೇ.4 ರಂದು ಬೆಳಿಗ್ಗೆ 11:30 ಕ್ಕೆ ರಂಗಮಂದಿರದಲ್ಲಿ ಮಹರ್ಷಿ ಭಗೀರಥ ಜಯಂತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲು ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಅಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂಜೆ ಸಲ್ಲಿಸಿ ನಂತರ ಮಹರ್ಷಿ ಭಗೀರಥ ಅವರ ಭಾವಚಿತ್ರದ ಮೆರವಣಿಗೆ ಮಾಡಲಾಗುವುದು. ಮೆರವಣಿಗೆಯು ಶಿವಾಜಿ ವೃತ್ತ, ಭಗತಸಿಂಗ್ ವೃತ್ತ, ಬಸವೇಶ್ವರ್ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಜನರಲ್ ಕರಿಯಪ್ಪ ವೃತ್ತದಿಂದ ನೇರವಾಗಿ ಚನ್ನಬಸವ ಪಟ್ಟದೇವರ ರಂಗಮಂದಿರಕ್ಕೆ ತಲುಪುವುದು ಎಂದು ಮಾಹಿತಿ ನೀಡಿದರು.
ಹೋದ ವರ್ಷ ಮಹರ್ಷಿ ಭಗೀರಥ ಅವರ ಜಯಂತಿಯನ್ನು ಕೆಲ ಸರ್ಕಾರಿ ಕಚೇರಿಯಲ್ಲಿ ಆಚರಣೆ ಮಾಡಲಿಲ್ಲ. ಈ ವರ್ಷ ಕಡ್ಡಾಯವಾಗಿ ಎಲ್ಲ ಸರಕಾರಿ ಕಚೇರಿಗಳಲ್ಲಿ ಆಚರಣೆ ಮಾಡಬೇಕು. ಇಲ್ಲವಾದರೆ ಜಿಲ್ಲಾಡಳಿತದಿಂದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಸಮಾಜದ ಬಾಂಧವರು ಹಾಗೂ ಉಪ್ಪಾರ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪ್ಪಾರ ಸಮಾಜ ಸಂಘದ ಜಿಲ್ಲಾಧ್ಯಕ್ಷ ತಾನಾಜಿ ಸಗರ್, ವಿಜಯಕುಮಾರ್ ಉಪ್ಪಾರ, ಶಾಂತಕುಮಾರ್, ಬಸವರಾಜ್ ಮಾಳಗೆ, ರಾಜಶೇಖರ್ ಸೇಡಂಕರ್, ಮಹೇಶ್ ಪಾಂಚಾಳ್ ಹಾಗೂ ರಮೇಶ್ ಭಾಗವಹಿಸಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3