Saturday, May 24, 2025
Homeಜಿಲ್ಲೆಕಾಲುಬಾಯಿ ಲಸಿಕೆ ಅಭಿಯಾನ ಚಾಲನೆ : ಶಾಸಕ ಪ್ರಭು ಚವ್ಹಾಣ್*

ಕಾಲುಬಾಯಿ ಲಸಿಕೆ ಅಭಿಯಾನ ಚಾಲನೆ : ಶಾಸಕ ಪ್ರಭು ಚವ್ಹಾಣ್*

ಬೀದರ್,  ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರುಗಳ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಇವತ್ತಿನಿಂದ  4 ಜೂನ್ ರವರೆಗೆ ಒಂದು ತಿಂಗಳ ಕಾಲ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕರು ತಿಳಿಸಿದ್ದಾರೆ.

ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ  ಇಂದಿನಿಂದ ಒಂದು ತಿಂಗಳ ಕಾಲ ತಾಲ್ಲೂಕಿನಲ್ಲಿ ಲಸಿಕೆ ಅಭಿಯಾನವನ್ನು ಜಾರಿಗೊಳಿಸಲಾಗುತ್ತಿದೆ. ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿರುತ್ತಾರೆ

ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸಿ, ನಿರ್ಮೂಲನೆಗೊಳಿಸಲು  ರೋಗದ ವಿರುದ್ಧ ಲಸಿಕೆ ಹಾಕಿಸುವುದು ಪರ್ಯಾಯವಾಗಿದೆ. ಈ ರೋಗದ ವಿರುದ್ಧ ಎಲ್ಲಾ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುವುದು. ಪ್ರತಿ ಜಾನುವಾರುಗಳಿಗೆ ಪ್ರತ್ಯೇಕ ಸಿರಿಂಜ್ ಮತ್ತು ನೀಡಲ್.ಗಳನ್ನು ಬಳಸಲು ಸಹಾಯಕ ನಿರ್ದೇಶಕರು ಔರಾದ್ ಇವರಿಗೆ ಸೂಚನೆ ನೀಡಲಾಗಿದೆ,

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಪಶುಗಳಲ್ಲಿ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಕಾಲುಬಾಯಿ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದೆ.

ರೈತರು ಹಾಗೂ ಪಶು ಪಾಲಕರು ತಪ್ಪದೇ ತಮ್ಮ ಜಾನುವಾರುಗಳಿಗೆ ಈ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಅವುಗಳನ್ನು ಸಂರಕ್ಷಿಸಿಕೊಳ್ಳಬೇಕು. ಶಾಸಕರ ಎಲ್ಲಾ ರೈತರಿಗೆ ಮನವಿ ಮಾಡಿದ್ದಾರೆ

ಈ ಸಂದರ್ಭದಲ್ಲಿ  ಪ್ರದೀಪ್ ಪವಾರ್, ಪ್ರತಾಪ್ ಪವಾರ್, ಇಲಾಖೆಯ ಸಹಾಯಕ  ಡಾ ಫಾಹಿಮ್ ಖುರೇಷಿ ಸೇರಿದಂತೆ ಇತರರಿದ್ದರು.
———————-

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3