Friday, June 13, 2025
HomePopularಆರೋಗ್ಯ ಸಂಜೀವಿನಿ ಯೋಜನೆ ಪ್ರಯೋಜನ ಪಡೆಯಿರಿ - ಸೋಮಶೇಖರ್ ಬಿರಾದಾರ್ ಸಲಹೆ

ಆರೋಗ್ಯ ಸಂಜೀವಿನಿ ಯೋಜನೆ ಪ್ರಯೋಜನ ಪಡೆಯಿರಿ – ಸೋಮಶೇಖರ್ ಬಿರಾದಾರ್ ಸಲಹೆ

ಕಾರ್ಯಕಾರಿಣಿ ಸಭೆಯಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸೋಮಶೇಖರ ಬಿರಾದಾರ ಸಲಹೆ
ಆರೋಗ್ಯ ಸಂಜೀವಿನಿ ಯೋಜನೆ ಪ್ರಯೋಜನ ಪಡೆಯಿರಿಬೀದರ್: ರಾಜ್ಯ ಸರ್ಕಾರಿ ನೌಕರರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಪ್ರಯೋಜನ ಪಡೆಯಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಸಲಹೆ ಮಾಡಿದರು.
ನಗರದ ಪ್ರತಾಪನಗರದ ನೌಕರರ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಜನೆಯಡಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಿಗದಿತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ವೈದ್ಯಕೀಯ ಸೌಲಭ್ಯ ಸಿಗಲಿದೆ. ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್, ಕಿಡ್ನಿ ವೈಫಲ್ಯ, ಡಯಾಲಿಸಿಸ್, ಅಂಗಾಂಗ ಕಸಿ, ಮೂಳೆ ಸಮಸ್ಯೆ, ನವಜಾತ ಶಿಶುಗಳ ಚಿಕಿತ್ಸಾ ಸೇವೆ, ತುರ್ತು ಶಸ್ತ್ರಚಿಕಿತ್ಸೆ, ಲಘು ಶಸ್ತ್ರಚಿಕಿತ್ಸೆ, ಲಘು ವೈದ್ಯಕೀಯ ಸೇವೆ ಮೊದಲಾದವು ಇದರ ವ್ಯಾಪ್ತಿಗೆ ಬರಲಿವೆ ಎಂದು ತಿಳಿಸಿದರು.


ಸಂಘದ ಪದಾಧಿಕಾರಿಗಳು ಯೋಜನೆ ಕುರಿತು ನೌಕರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ನೌಕರರು ಬ್ಯಾಂಕ್‍ಗಳ ಸಮಗ್ರ ವೇತನ ಪ್ಯಾಕೇಜ್ ಯೋಜನೆ ಲಾಭ ಸಹ ಪಡೆಯಬೇಕು ಎಂದು ತಿಳಿಸಿದರು.
ಸಂಘವು ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕೂ ಹೆಚ್ಚು ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಿದೆ ಎಂದು ಹೇಳಿದರು.
ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ನೌಕರರನ್ನು ಸನ್ಮಾನಿಸಲಾಯಿತು.
ಸಂಘದ ರಾಜ್ಯ ಪರಿಷತ್ ಸದಸ್ಯ ರಾಜಕುಮಾರ ಮಾಳಗೆ, ಜಿಲ್ಲಾ ಘಟಕದ ಖಜಾಂಚಿ ದೇವಪ್ಪ ಚಾಂಬೋಳೆ, ಕಾರ್ಯಾಧ್ಯಕ್ಷ ಶಿವರಾಜ ಕಪಲಾಪುರೆ, ಹಿರಿಯ ಉಪಾಧ್ಯಕ್ಷರಾದ ಗೌತಮ ಚಿಂತಲಗೇರಾ, ಅಬ್ದುಲ್ ಸತ್ತಾರ್, ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ದಿಲೀಪಕುಮಾರ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ, ಚಿಟಗುಪ್ಪ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ ಉಪ್ಪಿನ್, ಮನೋಹರ ಕಾಶಿ, ಸುರೇಶ ಟಾಳೆ, ರಾಜು ಸಾಗರ್, ದಿಲೀಪಕುಮಾರ ಡೊಂಗರಗೆ ಮತ್ತಿತರರು ಇದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3