ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಸದಸ್ಯರಾಗಿ ಮನದೀಪ್ ಕೌರ್ ನೇಮಕ
ಬೀದರ್ : ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಸದಸ್ಯರನ್ನಾಗಿ ಬೀದರ್ ನಗರದ ಮನದೀಪ ಕೌರ್ ಸರದಾರ ಮನಪ್ರೀತಸಿಂಗ್ ಅವರನ್ನು ಮುಂದಿನ 3 ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ನಾಮ ನಿರ್ದೇಶಿಸಿ ಆದೇಶ ಹೊರಡಿಸಲಾಗಿದೆ.
ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ. ಜ್ಯೋತಿಪ್ರಕಾಶ ಅವರು ಜೂನ್ 12 ರಂದು ರಾಜ್ಯದ ವಿವಿಧ ಜಿಲ್ಲೆಯ 8 ಜನರನ್ನು ನಾಮನಿರ್ದೇಶಿತ ಮಾಡಿ ಆದೇಶ ಹೊರಡಿಸಿದ್ದು ಅದರಲ್ಲಿ ಬೀದರ್ ಜಿಲ್ಲೆಯಿಂದ ಮನದೀಪ್ ಕೌರ್ ಅವರಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
—————
