Friday, January 16, 2026
HomePopularಅ. 7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ

ಅ. 7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ

ಅ. 7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ

ಬೀದರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್.7 ರಂದು ಮಧ್ಯಾಹ್ನ 1.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರ ಬೀದರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ, ವಿಧಾನ ಪರಿಷತ್ ಶಾಸಕಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಕೃಷ್ಣಾ ಮೇಲ್ದಂಡೆ ಯೋಜನೆ (ಕಾಡಾ) ಭೀಮರಾಯನಗುಡಿ, ಕಲಬುರಗಿಯ ಅಧ್ಯಕ್ಷರಾದ ಬಾಬು ಹೊನ್ನನಾಯ್ಕ, ಬೀದರ ನಗರಸಭೆ ಅಧ್ಯಕ್ಷರಾದ ಮಹಮ್ಮದ್ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅತಿಥಿ ಉಪನ್ಯಾಸವನ್ನು ಬೀದರ ನಿಡವಂಚಾ ಸಾಮಾಜಿಕ ಚಿಂತಕರಾದ ಶಿವಾನಂದ ನಿಡವಂಚಾ ಅವರು ಮಾಡಲಿದ್ದಾರೆ.
*****
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

Nagem Uddin on Smartwatch Series 3
Md Rana Ahmad on Smartwatch Series 3